ಮುಕ್ತಾಯ ಮಾಡು

    ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಕೊಟ್ರವ್ವ ಸೋಮಪ್ಪ ಮುದಗಲ್

    ಗೌರವಾನ್ವಿತ ಶ್ರೀಮತಿ ನ್ಯಾಯಮೂರ್ತಿ ಕೆ.ಎಸ್.ಮುದಗಲ್.
    • ಹುದ್ದೆ: ನ್ಯಾಯಾಧೀಶರು, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಕೌಟುಂಬಿಕ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಾಧೀಶರು

    ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಕೊಟ್ರವ್ವ ಸೋಮಪ್ಪ ಮುದಗಲ್ ರವರು ಡಿಸೆಂಬರ್ 22, 1963ರಂದು ಜನಿಸಿದ್ದು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ, ಬಿಕಾಂ, ಎಲ್.ಎಲ್.ಬಿ. ಪದವಿಯನ್ನು ಪಡೆದಿರುತ್ತಾರೆ. ಶ್ರೀಯುತರು ಜುಲೈ 6, 1988 ರಂದು ವಕೀಲರಾಗಿ ವೃತ್ತಿ ಜೀವನ ಪ್ರಾರಂಭಿಸಿದ್ದು, ಜೂನ್ 17, 1998 ರಂದು ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡರು. ಶ್ರೀಯುತರು ನವೆಂಬರ್ 14, 2016 ರಂದು ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡು ನವೆಂಬರ್ 3, 2018 ರಂದು ಕರ್ನಾಟಕ ಉಚ್ಛ ನ್ಯಾಯಾಲಯದ ಖಾಯಂ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುತ್ತಾರೆ.