ಮುಕ್ತಾಯ ಮಾಡು

    ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಕೆ. ಸೋಮಶೇಖರ್

    ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ಕೆ. ಸೋಮಶೇಖರ್
    • ಹುದ್ದೆ: ನ್ಯಾಯಾಧೀಶರು, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಆಡಳಿತಾತ್ಮಕ ನ್ಯಾಯಾಧೀಶರು, ನಗರ ಸಿವಿಲ್ ನ್ಯಾಯಾಲಯ, ಬೆಂಗಳೂರು

    ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಕೆ. ಸೋಮಶೇಖರ್: ಸೆಪ್ಟೆಂಬರ್ 15, 1963ರಂದು ಜನಿಸಿದ ಶ್ರೀಯುತರು ಜನವರಿ 27, 1990 ರಂದು ವಕೀಲ ವೃತ್ತಿ ಆರಂಭಿಸಿದರು. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ವ್ಯಾಜ್ಯಗಳಲ್ಲಿ ವಕೀಲರಾಗಿ ಅಭ್ಯಾಸ ಮಾಡಿದ ಮಾನ್ಯರು ಜೂನ್ 17, 1998 ರಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ನೇಮಕಗೊಂಡು ವಿಜಯಪುರ ಮತ್ತು ಬೆಂಗಳೂರು ನಗರದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ, ಉತ್ತರ ಕನ್ನಡ, ಕಾರವಾರ, ಹಾಸನ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಮತ್ತು ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದ ಪ್ರಧಾನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ರಿಜಿಸ್ಟ್ರಾರ್ ನ್ಯಾಯಾಂಗ ಮತ್ತು ರಿಜಿಸ್ಟ್ರಾರ್ ವಿಜಿಲೆನ್ಸ್ ಆಗಿ ಕಾರ್ಯ ನಿರ್ವಹಿಸಿರುವ ಶ್ರೀಯುತರು ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನವೆಂಬರ್ 14, 2016 ರಂದು ನೇಮಕಗೊಂಡರು ಮತ್ತು ನವೆಂಬರ್ 3, 2018 ರಂದು ಕರ್ನಾಟಕ ಉಚ್ಛ ನ್ಯಾಯಾಲಯದ ಖಾಯಂ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು.